ನಾನು ಪೂರ್ಣಪ್ರಜ್ಞ ಕಾಲೇಜಿಗೆ 1977ರಲ್ಲಿ ಬಂದು ಸೇರಿದಾಗ ಸ್ವಲ್ಪ ಸಮಯ ABMM ಹೋಸ್ಟೆಲ್ನಲ್ಲಿದ್ದು ನಂತರ ಹೆಚ್ಚಿನ ಅನುಕೂಲತೆಗಾಗಿ ಹೋಗಿ ಸೇರಿದ್ದು ಉಡುಪಿಯ ವಾದಿರಾಜ ಮಾರ್ಗದಲ್ಲಿದ್ದ ಭೋಜರಾವ್ ಕಂಪೌಂಡ್ಗೆ. ಅಲ್ಲಿನಾನು ಕಳೆದ ಮೂರು ವರ್ಷಗಳಲ್ಲಿ ನೆನಪಿನಲ್ಲಿ ಖಾಯಂ ಆಗಿ ಇರುವಂತಹ ವ್ಯಕ್ತಿ ಗೋಪಾಲ ಮಾಸ್ಟ್ರು ಹಾಗೂ ಶಾರದಾ ಟೀಚರ್ ಹಾಗೂ ಅವರ ಮಕ್ಕಳಾದ ಸುಧೀರ್ ಹಾಗೂ ಮಮತ. ಗೋಪಾಲ ಮಾಸ್ಟ್ರು ಅವರ ಮನೆ ಸಹ ಅದೇ ಜಾಗದಲ್ಲಿತ್ತು. ನಮ್ಮನ್ನು ಬಾರ್ಕೂರಿಗೆ ಬಾಸ್ಕರ ಕೋಟ್ಯಾನ್ ಮನೆಗೆ, ಬೆಣ್ಣೆಕದ್ರುಗೆ ಕರೆದುಕೊಂಡು ಹೋದದ್ದು, ಕೆಲವು ಪ್ರವಾಸಕ್ಕೆ ಕರೆದುಕೊಂಡು ಹೋದದ್ದು, ಆಗಾಗ ಮಿತ್ರಸಮಾಜ ಹೋಟೇಲಿಗೆ ಕರೆದುಕೊಂಡು ಹೋಗುತ್ತಿದ್ದುದು ಈಗಲೂ ನೆನಪಿದೆ. ನನ್ನ ಸಹಪಾಠಿಗಳಾದ ಕಾಸರಗೋಡಿನ ನಾರ್ತ್ ಮಲಬಾರ್ ಬೇಂಕಿನಲ್ಲಿ ಉನ್ನತ ಹುದ್ದೆಯಲ್ಲಿದ್ದು ಈಗ ಕುಂಬಳೆಯಲ್ಲಿ ನಿವೃತ್ತಿ ಜೀವನ ನಡೆಸುತ್ತಿರುವ ಶಿವರಾಮ ಭಟ್ ಹಾಗೂ ಸ್ಟೇಟ್ ಬೇಂಕಿನಿಂದ ಆಪೀಸರ್ ಆಗಿ ನಿವೃತ್ತಿ ಹೊಂದಿದ ಮುಳ್ಳೇರಿಯ ಸಮೀಪದ ಅಯಿಪಂಜಿಗುಳಿಯ ಹಾಗೂ ಈಗ ಮೈಸೂರಿನಲ್ಲಿ ನಿವೃತ್ತಿ ಜೀವನ ನಡೆಸುತ್ತಿರುವ ಮುರಳೀಧರ ಎ ಆರ್ - ನಾವು ಗೋಪಾಲ ಮಾಸ್ಟ್ರು ಹಾಗೂ ಟೀಚರ್ ಅವರಿಂದ ತುಂಬ ಸಹಾಯ ಸಹಕಾರಗಳನ್ನು ಪಡೆದಿದ್ದೇವು. ಯಾವುದೇ ವಿಷಯದ ಬಗೆಗೆ ಹೆಚ್ಚಿನ ವಿಷಯ ಬೇಕಾದರೆ ಅವರಿಬ್ಬರಲ್ಲಿ ವಿಚಾರಿಸಿದರೆ ಸಾಕಿತ್ತು. ಗೋಪಾಲ ಮಾಸ್ಟ್ರು ನಮ್ಮನ್ನು ಬಿಟ್ಟು ಬೇಗನೆ ಹೋದದ್ದು ನಮಗೆಲ್ಲಾ ತುಂಬಾ ಬೇಸರವನ್ನು ತಂದಿದೆ.
Welcome to my blog! As a retired professor, I'm passionate about higher education, technology, and gadgets.
Saturday, February 22, 2025
ಭೋಜರಾವ್ ಕಂಪೌಂಡ್, ಗೋಪಾಲ ಮಾಸ್ಟ್ರು ಹಾಗೂ ಶಾರದಾ ಟೀಚರ್
ಮಮತನ ಮಗಳ ಮದುವೆಗೆ ಹೋಗಲಿಕ್ಕೆ ಆಗದಕಾರಣ ಮದುವೆ ಮೊದಲ ದಿನ ಜರಗುವ ಆರತಿಗೆ ಹೋಗುವುದೆಂದು ತೀರ್ಮಾನಿನಿಸಿದೆವು. ನನ್ನ ಬಾವ ಗೋಪಿಕೃಷ್ಣ ಭಟ್ ಅವರ ಯೋಜನೆಯಂತೆ 22ನೇ ತಾರೀಕಿನಂದು ಅವರ ಕಾರಿನಲ್ಲಿ ನಾನು, ಹಾಗೂ ನಾನು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಕಲಿತು ಮುಗಿಸಿದ ನಾಲ್ಕು ವರ್ಷದ ನಂತರ ಭೋಜರಾವ್ ಕಂಪೌಂಡಿನಲ್ಲಿ ವಾಸ ಮಾಡುತ್ತಿದ್ದ ಉಡುಪಿಯ ಟೌನ್ ಬೇಂಕಿನ ನಿವೃತ್ತ ಮೆನೇಜರ್ ಆಗಿದ್ದ ಸುಬ್ರಮಣ್ಯ ಉಡುಪರು, ಕಾರ್ಪರೇಶನ್ ಬೇಂಕಿನ ನಿವೃತ್ತ ಮೆನೇಜರ್ ಆಗಿದ್ದ ನಾಗರಾಜ್ ಹಾಗೂ ಗೋಪಿಕೃಷ್ಣ ಭಟ್ ಅವರೋಂದಿಗೆ ಹೊರಟೆವು. ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುತ್ತಾ ಆಗುಂಬೆಯಲ್ಲಿ ಚಾ ಸೇವಿಸಿ ತೀರ್ಥಹಳ್ಳಿಗೆ ತಲಪುವಾಗ ಸುಮಾರು 11.45 ಆಗಿತ್ತು. ಶರದಾ ಟೀಚರ್ನೊಂದಿಗೆ ಕಳೆದ ದಿನಗಳ ನೆನಪುಗಳನ್ನು ಹಂಚಿಕೊಂಡೆವು. ಸುಧೀರ್ನ್ನು ಸುಮಾರು ನಲ್ವತ್ತೆರಡು ವರ್ಷಗಳ ನಂತರ ನೋಡಿ ಸಂತಸವಾಯಿತು. ಕಾರ್ಯಕ್ರಮ ಮುಗಿಸಿ ಮಣಿಪಾಲಕ್ಕೆ ಬರುವಾಗ ಸುಮಾರು 4.30 ಗಂಟೆ ಆಗಿತ್ತು. ಬದಲಾವಣೆ ಅನಿವಾರ್ಯ, ಆದರೆ ನಮ್ಮ ಆತ್ಮೀಯ ನೆನಪುಗಳು ಎಂದಿಗೂ ಹಸಿರಾಗಿವೆ. ಈ ನೆನಪುಗಳನ್ನು ಹಂಚಿಕೊಳ್ಳುವಾಗ ಸಂತಸವಾಗುತ್ತದೆ, ಅಲ್ಲದೆ. ಜೀವನ ಬದಲಾಗಿ ಒಂದಿಷ್ಟು ದಿನಗಳು ಮರಳಿ ಬಂದಂತೆ ಅನುಭವವಾಗುತ್ತದೆ.
Subscribe to:
Post Comments (Atom)
ಪ್ರೊ. ಕು. ಶಿ. ಹರಿದಾಸ ಭಟ್ಟ ಜಾನಪದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ತಾರೀಕು 21-06-2025ರಂದು, ಡಾ. ಎನ್. ಟಿ. ಭಟ್ಟರಿಗೆ ಮೊದಲೇ ತಳಿಸಿದ್ದಂತೆ, ಅವರನ್ನು ಎಂ. ಜಿ. ಎಂ ಕಾಲೇಜಿನ ಟಿ. ಮೋಹನದಾಸ್ ಪೈ ಕೌಶಲ ಅಭಿವೃದ್ಧಿ ಕೇಂದ್ರದ ಸಭಾಂಗಣ...

-
Date of Travel: 18th April (Good Friday) Travelers: Myself, Shreemathi, Gopi and family Route: Manipal – Kamalashile – Moodugallu – Shan...
-
Date: 4th April 2025 Venue: Katipalla, near Suratkal On 4th April 2025, I, along with my wife Shreemathi, had the joy of attending the e...
-
ಎಂ. ಜಿ. ಎಂ ಕಾಲೇಜಿನಲ್ಲಿ ಸುಮಾರು ಮೂವತ್ತಮೂರು ವರ್ಷಗಳಿಗಿಂತಲೂ ಮಿಕ್ಕಿ ಸೇವೆ ಸಲ್ಲಿಸಿದ ಪ್ರೊ. ಶ್ರೀನಿವಾಸ ಉಪಾಧ್ಯಾಯರು ತಾರೀಕು 03-06-2025ರಂದು ದೈವಾಧೀನರಾದ ಕು...
No comments:
Post a Comment